Home » ರಾಜ್ಯ » ಸರ್ಕಾರದಿಂದ ಉಚಿತ ಬೋರ್‌ವೆಲ್‌ಗೆ ಅರ್ಜಿ ಆಹ್ವಾನ!

ಸರ್ಕಾರದಿಂದ ಉಚಿತ ಬೋರ್‌ವೆಲ್‌ಗೆ ಅರ್ಜಿ ಆಹ್ವಾನ!

ಕರ್ನಾಟಕ ಸರ್ಕಾರ ವಿವಿಧ ಅಭಿವೃದ್ಧಿ ನಿಗಮಗಳ ಮೂಲಕ ಕರ್ನಾಟಕ ಜನರಿಗೆ ಹಲವು ಪ್ರಯೋಜನಗಳನ್ನು ನೀಡುತ್ತಾ ಬರುತ್ತದೆ. ಪ್ರತಿ ವರ್ಷದಂತೆ ಈ ವರ್ಷವೂ ಸಹ ಉಚಿತ ಉಚಿತ ಬೋರ್‌ವೆಲ್ ಗಾಗಿ ಅರ್ಜಿ (Application for Free borewell) . ಹೌದು, ಅಂಬೇಡ್ಕ‌ರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ, ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (Ambedkar Development Corporation, Valmiki Development Corporation, Backward Classes Development Corporation) ನಿಗಮಗಳ ಮೂಲಕ ಈ ಕಾರ್ಯಗಳನ್ನು ಮಾಡಲಾಗುತ್ತದೆ.

ಇದೀಗ ರೈತರಿಗೆ ಉಚಿತ ಬೋರ್‌ವೆಲ್‌ ಕೊರೆಸಲು ಅರ್ಜಿ ಆಹ್ವಾನ ಮಾಡಲಾಗಿದೆ. ಗಂಗಾ ಕಲ್ಯಾಣ ( Ganga kalyana) ಯೋಜನೆಯಡಿ ಈ ಸೌಲಭ್ಯ ಕಲ್ಪಿಸಿಕೊಡಲಾಗುತ್ತದೆ. ಅರ್ಹ ರೈತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡುವ ಮೂಲಕ ಇದರ ಪ್ರಯೋಜನ ಪಡೆಯಬಹುದಾಗಿದೆ.

ಗಂಗಾ ಕಲ್ಯಾಣ ಯೋಜನೆ

ವಿವಿಧ ನಿಗಮಗಳಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಸಣ್ಣ ಮತ್ತು ಅತಿ ಸಣ್ಣ ಜಮೀನು ಹಿಡುವಳಿದಾರರು ಇದಕ್ಕಾಗಿ ಅರ್ಜಿ ಸಲ್ಲಿಸಿ ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ಬೋರ್‌ವೆಲ್‌ ಕೊರೆಸುವುದು ಮಾತ್ರವಲ್ಲದೆ ಎಲ್ಲಾ ರೀತಿಯ ವಿದ್ಯುತ್‌ ಸಂಪರ್ಕ ಕಲ್ಪಿಸಿ ನಿಮ್ಮ ಜಮೀನಿಗೆ ನೀರುಣಿಸುವವರೆಗೆ ಇದು ಅನುಕೂಲ ಮಾಡಿಕೊಡುತ್ತದೆ.

ಸಹಾಯಧನ ಎಷ್ಟು?

ಅರ್ಹ ರೈತರಿಗೆ ₹1.5 ಲಕ್ಷದಿಂದ ₹3.50 ಲಕ್ಷದವರೆಗೆ ಸಹಾಯಧನವನ್ನು ನೀಡಲಾಗುತ್ತದೆ. ಅಲ್ಲದೆ ಜಾತಿ ಆಧಾರದ ಮೇಲೆ ಸಬ್ಸಿಡಿ ನೀಡಲಾಗುತ್ತದೆ. ಆಗಿದ್ರೆ ಬನ್ನಿ ಯಾರೆಲ್ಲಾ ಅರ್ಜಿ ಸಲ್ಲಿಕೆ ಮಾಡಬುದು ಅನ್ನೋ ಮಾಹಿತಿಯನ್ನು ತಿಳಿಯೋಣ.

ಅರ್ಜಿದಾರರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದವರು
ವಾರ್ಷಿಕ ಆದಾಯ ₹1.5 ಲಕ್ಷಕ್ಕಿಂತ ಹೆಚ್ಚು ಇರುವ ಹಾಗಿಲ್ಲ
ನಗರ ಪ್ರದೇಶದವರಿಗೆ ವಾರ್ಷಿಕ ಆದಾಯ ₹2 ಲಕ್ಷಕ್ಕಿಂತ ಹೆಚ್ಚು ಇರುವಾಗಿಲ್ಲ.
ಕನಿಷ್ಠ 21 ವರ್ಷ ವಯಸ್ಸಾಗಿರಬೇಕು.
ಜಮೀನು ಹಿಡುವಳಿಯ ಪ್ರಮಾಣ ಹೊಂದಿರಬೇಕು.
1.20 ಎಕರೆಯಿಂದ 5 ಎಕರೆ ಒಳಗೆ ಜಮೀನು ಹೊಂದಿರಬೇಕು.
ಯಾವೆಲ್ಲಾ ದಾಖಲೆಯನ್ನು ಸಲ್ಲಿಸಬೇಕು?

ಜಾತಿ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
ಇತ್ತೀಚಿನ ಪಹಣಿ ಪಟ್ಟಿ
ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರ
ಕುಟುಂಬ ಪಡಿತರ ಚೀಟಿ
ಬ್ಯಾಂಕ್ ಪಾಸ್‌ಬುಕ್
ಆಧಾರ್‌ ಕಾರ್ಡ್
ಯಾವೆಲ್ಲಾ ಅಭಿವೃದ್ಧಿ ನಿಗಮಗಳ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು?

ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ನಿಯಮಿತ
ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ
ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ
ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ
ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ
ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮ ನಿಯಮಿತ
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ
ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ
ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ
ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ
ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ
ಕರ್ನಾಟಕ ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮ

Kusum-C scheme: ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌! ಜೂನ್ 11 ರಂದು ಕುಸುಮ್-ಸಿ ಸೋಲಾರ್ ಯೋಜನೆ ಪ್ರಾರಂಭ

ಅರ್ಜಿ ಸಲ್ಲಿಕೆ ಮಾಡುವುದು ಹೇಗೆ?

ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ಸೇವಾಸಿಂದು ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕಿದೆ. ಇದಕ್ಕೆ ನೀವು ಕಂಪ್ಯೂಟರ್‌ ಸೆಂಟರ್‌ಗಳಿಗೆ ಹೋಗಬಹುದು. ಈ ಸಮಯದಲ್ಲಿ ನಿಮಗೆ ಏನಾದರೂ ಸಮಸ್ಯೆ ಇದ್ದರೆ ಕಲ್ಯಾಣ ಮಿತ್ರ 24×7 ಸಹಾಯವಾಣಿ (9482300400) ಮೂಲಕ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This